ಜನ ಮನದ ನಾಡಿ ಮಿಡಿತ

Advertisement

ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ

 

ಮಂಗಳೂರು -1-9-2024: ಅಮೃತ ನಗರ ಸರ್ಕಲ್ ಹತ್ತಿರ, ವಾಮಂಜೂರು ಲಿಂಗ ಮಾರು ಗುತ್ತು ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ ಇವರಿಂದ ಉಚಿತ ವೈದ್ಯಕೀಯ ಶಿಬಿರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೆರವೇರಿತು. ಈ ಎಲ್ಲ ಕಾರ್ಯಕ್ರಮಗಳು ಪೌರ ಸಮಿತಿ (ರಿ) ಅಮೃತನಗರ ನಡೆಸಿಕೊಟ್ಟಿದ್ದು ರಾಜೇಶ್ ಶೆಟ್ಟಿ ಹಿರಿಯ ವಿಭಾಗಿಯ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪ್ರವೀಣ್ ಚಂದ್ರ ಆಳ್ವ ತಿರುವೈಲು ಗುತ್ತು, ವಿರೋಧ ಪಕ್ಷದ ನಾಯಕರು, ಮಂಗಳೂರು ಮಹಾನಗರ ಪಾಲಿಕೆ ಹೇಮಲತಾ ರಘು ಸಾಲಿಯಾನ್ ಸದಸ್ಯರು, ತಿರುವೈಲು ವಾರ್ಡ್ , ಮಂಗಳೂರು ಮಹಾನಗರ ಪಾಲಿಕೆ ರಾಜೇಶ್ ಕೊಟ್ಟಾರಿ, ಅಧ್ಯಕ್ಷರು, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ, ರಾಜಕುಮಾರ್ ಶೆಟ್ಟಿ , ಉಪಾಧ್ಯಕ್ಷರು, ಪೌರ ಸಮಿತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್ ವಹಿಸಿದ್ದರು. ವೈದ್ಯಕೀಯ ಶಿಬಿರವನ್ನು ಡಾ. ಕಾರ್ತಿಕ್ ರೈ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ತಮ್ಮ ತಂದೆಯ ಸವಿ ನೆನಪಿಗಾಗಿ ಬಸ್ ತಂಗುದಾಣನವನ್ನು ಕೊಡುಗೆಯಾಗಿ ನೀಡಿದ ರಾಜಕುಮಾರ ಶೆಟ್ಟಿ ಅವರನ್ನು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಮಹನೀಯರನ್ನು ಸನ್ಮಾನಿಸಲಾಯಿತು.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!