ಜನ ಮನದ ನಾಡಿ ಮಿಡಿತ

Advertisement

ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ

 

ಮಂಗಳೂರು -1-9-2024: ಅಮೃತ ನಗರ ಸರ್ಕಲ್ ಹತ್ತಿರ, ವಾಮಂಜೂರು ಲಿಂಗ ಮಾರು ಗುತ್ತು ದಿ| ಶಿವಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಿದ ನೂತನ ಬಸ್ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ತಲಪಾಡಿ ಇವರಿಂದ ಉಚಿತ ವೈದ್ಯಕೀಯ ಶಿಬಿರ ಬೆಳಿಗ್ಗೆ 9:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೆರವೇರಿತು. ಈ ಎಲ್ಲ ಕಾರ್ಯಕ್ರಮಗಳು ಪೌರ ಸಮಿತಿ (ರಿ) ಅಮೃತನಗರ ನಡೆಸಿಕೊಟ್ಟಿದ್ದು ರಾಜೇಶ್ ಶೆಟ್ಟಿ ಹಿರಿಯ ವಿಭಾಗಿಯ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಪ್ರವೀಣ್ ಚಂದ್ರ ಆಳ್ವ ತಿರುವೈಲು ಗುತ್ತು, ವಿರೋಧ ಪಕ್ಷದ ನಾಯಕರು, ಮಂಗಳೂರು ಮಹಾನಗರ ಪಾಲಿಕೆ ಹೇಮಲತಾ ರಘು ಸಾಲಿಯಾನ್ ಸದಸ್ಯರು, ತಿರುವೈಲು ವಾರ್ಡ್ , ಮಂಗಳೂರು ಮಹಾನಗರ ಪಾಲಿಕೆ ರಾಜೇಶ್ ಕೊಟ್ಟಾರಿ, ಅಧ್ಯಕ್ಷರು, ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ, ರಾಜಕುಮಾರ್ ಶೆಟ್ಟಿ , ಉಪಾಧ್ಯಕ್ಷರು, ಪೌರ ಸಮಿತಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಗಾರ್ ವಹಿಸಿದ್ದರು. ವೈದ್ಯಕೀಯ ಶಿಬಿರವನ್ನು ಡಾ. ಕಾರ್ತಿಕ್ ರೈ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ತಮ್ಮ ತಂದೆಯ ಸವಿ ನೆನಪಿಗಾಗಿ ಬಸ್ ತಂಗುದಾಣನವನ್ನು ಕೊಡುಗೆಯಾಗಿ ನೀಡಿದ ರಾಜಕುಮಾರ ಶೆಟ್ಟಿ ಅವರನ್ನು ಹಾಗೂ ಈ ಕಾರ್ಯಕ್ರಮಕ್ಕೆ ಸಹಕರಿಸಿದ ಹಲವು ಮಹನೀಯರನ್ನು ಸನ್ಮಾನಿಸಲಾಯಿತು.

 

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!