ಉಡುಪಿ: ವೈದ್ಯನೊಬ್ಬ ತನ್ನ ಸಹಪಾಠಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಈ ಸಂಬಂಧ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕಿರುಕುಳ ನೀಡಿದ ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.
ಹೊರರಾಜ್ಯದವರಾದ ಇವರು ಆರಂಭದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯಲ್ಲಿದ್ದಾಗ ಡ್ಯಾನಿಷ್, ಮದುವೆಯ ಪ್ರಸ್ತಾಪ ಮುಂದಿಟ್ಟಿದ್ದ ಎನ್ನಲಾಗಿದೆ. ಡ್ಯಾನಿಷ್ ಖಾನ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕ್ಯಾಂಪಸ್ ನಲ್ಲಿ ಪರಿಚಯವಾಗಿತ್ತು. ನಂತರ 2024 ರ ಜನವರಿ 22 ರಂದು ಮಾತುಕತೆ ವೇಳೆ ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಆರೋಪಿಸಲಾಗಿದೆ. ರೂಮ್ ನಲ್ಲಿ ಆರೋಪಿಯು ತನ್ನ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದ. ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದ. 2024ರ ಆಗಸ್ಟ್ 28 ರವರೆಗೂ ಪೋನ್ನಲ್ಲಿ ತನ್ನನ್ನು ಸಂಪರ್ಕಿಸಿ ನಿರಂತರ ಕಿರುಕುಳ ಎಂದು ನೀಡಿದ್ದ ಎಂದು ವೈದ್ಯ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಪ್ರಕರಣದ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ( 27)ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…