ಕುಕ್ಕೆಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ರಸ್ತೆ ಕುಮಾರಧಾರ ಸೇತುವೆ ಯಿಂದ ಕೈಕಂಬ ವರೆಗೆ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು.
ಎಂತ ಪರಿಣತಿ ಪಡೆದ ಚಾಲಕನಿಗೂ ಈ ಹೊಂಡ ತಪ್ಪಿಸಲು ಸಾಧ್ಯವೇ ಇಲ್ಲ ಅಂತ ಹೊಂಡಗಳು ಸೃಷ್ಟಿಯಾಗಿದೆ.
ಬೆಂಗಳೂರು, ಧರ್ಮಸ್ಥಳ, ಉಪ್ಪಿನಂಗಡಿ ಕಡೆಯಿಂದ ಕುಕ್ಕೆಗೆ ಬರುವ ಭಕ್ತರು,ಸಾರ್ವಜನಿಕರು,ಇದೆ ರಸ್ತೆಯಲ್ಲಿ ತಮ್ಮ ವಾಹನಗಳನ್ನು ಹರಿಸಿ ಕೊಂಡೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.
ಅಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚಾರಿಸುತ್ತಾರೆ,ಪಾಪ ಹೊಂಡ ಇದೆ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದು.ವಾಹನ ಸವಾರರಾದ ಉದ್ಯಮಿ ಸೀತಾರಾಮ ಗೌಡ,ದಿನೇಶ್ ಗಾಂಗೆಯ,ಉಮೇಶ್ ಅವರು ಇಂದು ಟೇಪ್ ಹಿಡಿದು ಅಳತೆ ಮಾಡಿದರು.ಕುಮಾರಧಾರ ಸೇತುವೆ ಬಳಿ ಸುಮಾರು 12 ಫೀಟ್ ಅಗಲಕ್ಕೆ, ಮೂರು ಫೀಟ್ ಆಳದ ಹೋಂಡ ಪತ್ತೆಯಾಗಿದೆ.
ಇನ್ನು ಅಲ್ಲೇ ಸ್ವಲ್ಪ ಮುಂದೆ ಹೋದರೆ ಅದೇ ರೀತಿಯ ಇನ್ನೊಂದು ದೊಡ್ಡ ಕೊಂಡ ನಿರ್ಮಾಣ ಆಗಿದೆ.ಈ ಹೋಂಡ ತಪ್ಪಿಸುವ ಬರದಲ್ಲಿ ಬೈಕ್ ಸವಾರರು ಮಗುಚಿ ಬಿದ್ದು ಅಪಘಾತ ಸಂಭವಿಸುತ್ತಿದೆ.
ಇನ್ನು ನಾಲ್ಕು ಚಕ್ರದ ವಾಹನಗಳಂತೂ ಹೊಂಡ ತಪ್ಪಿಸಲು ರೋಂಗ್ ಸೈಡ್ ನಲ್ಲಿ ಪ್ರಯಾಣ ಮಾಡುತ್ತಾರೆ.
ದುರ್ಘಟನೆಗಳು ಸಂಭವಿಸುವ ಮೊದಲೇ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗ ಈ ಹೊಂಡಗಳನ್ನು ಮುಚ್ಚಿ ರಾಜ್ಯ ಹೆದ್ದಾರಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ, ಈ ರಾಜ್ಯ ಹೆದ್ದಾರಿಯಲ್ಲಿ ಸುಳ್ಯ ಮಡಿಕೇರಿ ಭಾಗಕ್ಕೆ ಸಂಚರಿಸುವ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕಾಗಿ ನಮ್ಮ ಕಳಕಳಿಯ ವಿನಂತಿ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…