ಉಳ್ಳಾಲ: ಬಸ್ಸಿನಲ್ಲಿ ಕುಸಿದುಬಿದ್ದ ಮಹಿಳೆಯನ್ನು ಬಸ್ ಸಿಬ್ಬಂದಿ ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಮಾನವೀಯತೆ ಮರೆದಿರುವ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ.
ತಕ್ಷಣ ಕರ್ಯಪ್ರವೃತ್ತರಾದ ಚಾಲಕ ಸವಾದ್ , ನಿರ್ವಾಹಕ ಯಾಕೂಬ್ ೧೦ ಕಿ.ಮೀ ಉದ್ದಕ್ಕೆ ಬಸ್ಸನ್ನು ತಂದು ನಾಟೆಕಲ್ ಕಣಚೂರು ಆಸ್ಪತ್ರೆಯೊಳಕ್ಕೆ ಕೊಂಡೊಯ್ದು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದಾರೆ. ಘಟನೆ ಕುರಿತ ವೀಡಿಯೋ ಕಣಚೂರು ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಮಹಿಳೆ ಆರೋಗ್ಯದಲ್ಲಿ ಚೇತರಿಕೆ ಕಂಡುಬAದಿರುವುದಾಗಿ ಬಸ್ ಸಿಬ್ಬಂದಿ ತಿಳಿಸಿದ್ದಾರೆ.ಮಂಗಳೂರು ನಗರದಲ್ಲಿ ಇದೇ ಮಾದರಿಯಲ್ಲಿ ಎರಡು ಘಟನೆಗಳು ಮಾನವೀಯತೆಗೆ ಸಾಕ್ಷಿಯಾಗಿದ್ದರೆ, ಉಡುಪಿಯಲ್ಲೂ ವಾರದ ಹಿಂದೆ ಇಂತಹದ್ದೇ ಘಟನೆ ನಡೆದಿದ್ದು, ಇದೀಗ ಮುಡಿಪು ಭಾಗದಲ್ಲಿ ಖಾಸಗಿ ಬಸ್ ಸಿಬ್ಬಂದಿ ನಡೆಸಿದ ಕಾರ್ಯ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.
ಖಾಸಗಿ ಬಸ್ಸಿನಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ ಸಿಬ್ಬಂದಿ ದಾಖಲಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…