ಜನ ಮನದ ನಾಡಿ ಮಿಡಿತ

Advertisement

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್​​​​​​ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್​​ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್​​​ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.

 

ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ತಾಯಿ ಶ್ರೀ ರಾಜರಾಜೇಶ್ವರಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ನೀಡಲಾಗುತ್ತದೆ. ಇದರ ಜತೆಗೆ Let’s ಸೀಮೆಯ ಭಕ್ತಾಧಿಗಳು ದೇವರಿಗೆಮಾಡಿದ ನೈವೇದ್ಯವನ್ನು ಮನೆಮನೆಗೆ ಕೊಂಡು ಪೊಳಲಿ ಭಾಗದ ಮನೆ ಮನೆಯಲ್ಲಿ ಪುದ್ದರ್​​​ ಆಚರಣೆ ಮಾಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್​, ರಾಮ್​​​ ಭಟ್​​, ​ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಹಾಗೂ ಭಕ್ತರು ಮೊದಲಾದವರು ಭಾಗವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!