ಜನ ಮನದ ನಾಡಿ ಮಿಡಿತ

Advertisement

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್​​​​​​ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್​​ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್​​​ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.

 

ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ತಾಯಿ ಶ್ರೀ ರಾಜರಾಜೇಶ್ವರಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ನೀಡಲಾಗುತ್ತದೆ. ಇದರ ಜತೆಗೆ Let’s ಸೀಮೆಯ ಭಕ್ತಾಧಿಗಳು ದೇವರಿಗೆಮಾಡಿದ ನೈವೇದ್ಯವನ್ನು ಮನೆಮನೆಗೆ ಕೊಂಡು ಪೊಳಲಿ ಭಾಗದ ಮನೆ ಮನೆಯಲ್ಲಿ ಪುದ್ದರ್​​​ ಆಚರಣೆ ಮಾಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್​, ರಾಮ್​​​ ಭಟ್​​, ​ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಹಾಗೂ ಭಕ್ತರು ಮೊದಲಾದವರು ಭಾಗವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!