ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.
ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ತಾಯಿ ಶ್ರೀ ರಾಜರಾಜೇಶ್ವರಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ನೀಡಲಾಗುತ್ತದೆ. ಇದರ ಜತೆಗೆ Let’s ಸೀಮೆಯ ಭಕ್ತಾಧಿಗಳು ದೇವರಿಗೆಮಾಡಿದ ನೈವೇದ್ಯವನ್ನು ಮನೆಮನೆಗೆ ಕೊಂಡು ಪೊಳಲಿ ಭಾಗದ ಮನೆ ಮನೆಯಲ್ಲಿ ಪುದ್ದರ್ ಆಚರಣೆ ಮಾಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಹಾಗೂ ಭಕ್ತರು ಮೊದಲಾದವರು ಭಾಗವಹಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…