ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ ಬೆಳೆ ಒಳ್ಳೆಯ ರೀತಿಯಲ್ಲಿ ಆಗಲಿ ಎಂದು ಪ್ರಾರ್ಥನೆ ಮಾಡಲಾಗುತ್ತದೆ.
ತೆನೆಯನ್ನು ದೇವಾಲಯದ ಧ್ವಜಸ್ತಂಬದ ಮುಂಭಾಗದಲ್ಲಿ ಪ್ರಾರ್ಥನೆ ಮಾಡಿ, ಪುರೋಹಿತರ ನೇತೃತ್ವದಲ್ಲಿ ತೆನೆಯನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗಿ ತಾಯಿ ಶ್ರೀ ರಾಜರಾಜೇಶ್ವರಿ ಮುಂದೆ ಇಟ್ಟು ಪೂಜೆ ಮಾಡಲಾಗುತ್ತದೆ. ವಿಶೇಷ ಪೂಜೆಗಳು ನಡೆದು ನಂತರ ಅದನ್ನು ಭಕ್ತರಿಗೆ ನೀಡಲಾಗುತ್ತದೆ. ಇದರ ಜತೆಗೆ Let’s ಸೀಮೆಯ ಭಕ್ತಾಧಿಗಳು ದೇವರಿಗೆಮಾಡಿದ ನೈವೇದ್ಯವನ್ನು ಮನೆಮನೆಗೆ ಕೊಂಡು ಪೊಳಲಿ ಭಾಗದ ಮನೆ ಮನೆಯಲ್ಲಿ ಪುದ್ದರ್ ಆಚರಣೆ ಮಾಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಮಾಧವ ಭಟ್ ಪೊಳಲಿ, ಅನುವಂಶಿಕ ಮೊಕ್ತೇಸರರಾದ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ದೇವಾಲಯದ ಅರ್ಚಕ ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಹಾಗೂ ಭಕ್ತರು ಮೊದಲಾದವರು ಭಾಗವಹಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…