ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಬಸ್ – ಕಂಟೇನರ್ ನಡುವೆ ರಸ್ತೆ ಅಪಘಾತ, ಯುವಕ ಮೃತ್ಯು

ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.

ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್‌ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!