ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಬಸ್ – ಕಂಟೇನರ್ ನಡುವೆ ರಸ್ತೆ ಅಪಘಾತ, ಯುವಕ ಮೃತ್ಯು

ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.

ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್‌ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!