ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.
ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…