ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್
ನಿವಾಸಿ ಅಹ್ಮದ್ ಸಾಬಿಕ್ (27) ಮೃತಪಟ್ಟ ಯುವಕ. ಕಣ್ಣೂರು-ತಲಶೇರಿ ರಾಷ್ಟ್ರೀಯ ಹೆದ್ದಾರಿಯ ತೊಟ್ಟಡದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಸಾಬಿಕ್ ಕೆಲದಿನಗಳ ಹಿಂದೆಯಷ್ಟೇ ಗಲ್ಫ್ನಿಂದ ಊರಿಗೆ ಬಂದಿದ್ದ ಎನ್ನಲಾಗಿದೆ.
ದಾರಿಮಧ್ಯದಲ್ಲಿ ನಿಯಂತ್ರಣ ತಪ್ಪಿದ ಬಸ್ ಹಿಂಬದಿ ಕಂಟೈನರ್ ಲಾರಿಯ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪರಿಣಾಮ ಲಾರಿ ಸಮೀಪದ ಅಂಗಡಿಗೆ ನುಗ್ಗಿದೆ. ಡಿಕ್ಕಿ ಹೊಡೆದ ಬಸ್ಸಿನ ಬದಿಯಲ್ಲಿ ಅಹ್ಮದ್ ಸಾಬಿಕ್ ಕುಳಿತಿದ್ದ. ಈ ವೇಳೆ ಬಸ್ ರಸ್ತೆಯಲ್ಲಿ ಮೂರು ಬಾರಿ ಪಲ್ಟಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಗಲ್ಸ್ನಿಂದ ಬಂದಿದ್ದ ಸಾಬಿಕ್, ಕೊಟ್ಟಾಯಂನಲ್ಲಿರುವ ತನ್ನ ಸ್ನೇಹಿತನ ಸಂಬಂಧಿಕರಿಗೆ ಕಳುಹಿಸಿದ್ದ ವಸ್ತುಗಳನ್ನು ನೇರವಾಗಿ ನೀಡಲು ಹೋಗುತ್ತಿದ್ದನು ಎಂದು ಮೂಲಗಳು ತಿಳಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ವಾಹನಗಳ ಚಾಲಕರು ಸೇರಿ 24 ಮಂದಿ ಗಾಯಗೊಂಡಿದ್ದಾರೆ ಹಾಗೂ ವಾಹನಗಳು ಹಾನಿಗೊಳಗಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…