ಬಂಟ್ವಾಳ : ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ.ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹಾಜಬ್ಬ ಹೇಳಿದರು.
ಅವರು ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ಇಲ್ಲಿ “ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ” ಎಂಬ ವಿನೂತನ ಕಾರ್ಯಕ್ರಮದಲ್ಲಿ . ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದದ್ದು ಶಿಕ್ಷಣದಿಂದ ಮಾತ್ರವೇ ಎಲ್ಲಾ ರೀತಿಯ ಬೆಳವಣಿಗೆಯನ್ನು ಹೊಂದಲು ಸಾಧ್ಯ ಈ ಪ್ರಕಾರವಾಗಿ ಸರ್ಕಾರಿ ಶಾಲೆಗಳ ಕೆಲಸವು ಮಾದರಿಯಾಗಿದೆ ಹಾಗೂ
ಸೇವಾ ನಿರತರಾಗಿ ತೊಡಗಿಕೊಂಡಿರುವ ಶಿಕ್ಷಕ ವರ್ಗವು ಇದಕ್ಕೆ ಉತ್ತಮ ಉದಾಹರಣೆ ಅಲ್ಲದೆ ಸಾರ್ವಜನಿಕವಾಗಿ ವಿದ್ಯಾ ಆಸಕ್ತ ಮಹನೀಯರು ನೀಡುವ ಕೊಡುಗೆಗಳು ಒಂದು ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತವೆ ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಹಾಗೂ ಅದಕ್ಕೆ ಪೂರಕವಾದ ವಾತಾವರಣವನ್ನು ಕೊಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷೆ ಜೇಸಿಂತ ಡಿಸೋಜ, ರಾಜ್ಯ ಮಟ್ಟದ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮಾ ಪಿ ಜಿ , ಚಂದ್ರಿಕಾ ವೆಜಿಟೇಬಲ್ ಮೆಲ್ಕಾರ್ ಇದರ ಮಾಲಕ ಮಹಮ್ಮದ್ ಶರೀಫ್, ಸಹೋದರ ಮಹಮ್ಮದ್ ನಝೀರ್ ಮೊದಲಾದವರು ಉಪಸ್ಥಿತರಿದ್ದರು
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…