ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ..!

ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ ಕುಮಟಾ ನಿಲ್ದಾಣಕ್ಕೆ ಕರೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ರೈಲು ನಿಲ್ದಾಣದಿಂದ ಹೊರಟಿತ್ತು. ನಂತರ ಮಹಾದೇವ ರಾಜಧಾನಿ ರೈಲಿನ ಲೋಕೊ ಪೈಲಟ್ ಗೆ ಕರೆ ಮಾಡಿದರು. ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. 8 ನಿಮಿಷದಲ್ಲಿ ರೈಲು ವೆಲ್ಡಿಂಗ್ ಬಿಟ್ಟಿದ್ದ ಸ್ಥಳಕ್ಕೆ ಬರುವುದರಲ್ಲಿತ್ತು. ತಡ ಮಾಡದ ಮಹಾದೇವ, ಹಳಿ ಮೇಲೆ ಓಡಿ ಐದು ನಿಮಿಷದಲ್ಲಿ ಅರ್ಧ ಕಿ.ಮೀ. ಕ್ರಮಿಸಿ ರೈಲಿಗೆ ನಿಲ್ಲುವಂತೆ ಸೂಚನೆ ನೀಡಿದರು. ಇದರಿಂದ ಸಂಭಾವ್ಯ ಅಪಾಯ ತಪ್ಪಿತು. ಸಿಬ್ಬಂದಿ ಹಳಿ ಜೋಡಣೆ ಬಿಟ್ಟಿದ್ದ ಸ್ಥಳದಲ್ಲಿ ವೆಲ್ಡಿಂಗ್ ಮಾಡಿದ ನಂತರ ರೈಲು ಕಾರವಾರದ ಕಡೆಗೆ ಪ್ರಯಾಣ ಬೆಳೆಸಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!