ಜನ ಮನದ ನಾಡಿ ಮಿಡಿತ

Advertisement

ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ..!

ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ ಕುಮಟಾ ನಿಲ್ದಾಣಕ್ಕೆ ಕರೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ರೈಲು ನಿಲ್ದಾಣದಿಂದ ಹೊರಟಿತ್ತು. ನಂತರ ಮಹಾದೇವ ರಾಜಧಾನಿ ರೈಲಿನ ಲೋಕೊ ಪೈಲಟ್ ಗೆ ಕರೆ ಮಾಡಿದರು. ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. 8 ನಿಮಿಷದಲ್ಲಿ ರೈಲು ವೆಲ್ಡಿಂಗ್ ಬಿಟ್ಟಿದ್ದ ಸ್ಥಳಕ್ಕೆ ಬರುವುದರಲ್ಲಿತ್ತು. ತಡ ಮಾಡದ ಮಹಾದೇವ, ಹಳಿ ಮೇಲೆ ಓಡಿ ಐದು ನಿಮಿಷದಲ್ಲಿ ಅರ್ಧ ಕಿ.ಮೀ. ಕ್ರಮಿಸಿ ರೈಲಿಗೆ ನಿಲ್ಲುವಂತೆ ಸೂಚನೆ ನೀಡಿದರು. ಇದರಿಂದ ಸಂಭಾವ್ಯ ಅಪಾಯ ತಪ್ಪಿತು. ಸಿಬ್ಬಂದಿ ಹಳಿ ಜೋಡಣೆ ಬಿಟ್ಟಿದ್ದ ಸ್ಥಳದಲ್ಲಿ ವೆಲ್ಡಿಂಗ್ ಮಾಡಿದ ನಂತರ ರೈಲು ಕಾರವಾರದ ಕಡೆಗೆ ಪ್ರಯಾಣ ಬೆಳೆಸಿತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!