ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ.
ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ ಕುಮಟಾ ನಿಲ್ದಾಣಕ್ಕೆ ಕರೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ರೈಲು ನಿಲ್ದಾಣದಿಂದ ಹೊರಟಿತ್ತು. ನಂತರ ಮಹಾದೇವ ರಾಜಧಾನಿ ರೈಲಿನ ಲೋಕೊ ಪೈಲಟ್ ಗೆ ಕರೆ ಮಾಡಿದರು. ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. 8 ನಿಮಿಷದಲ್ಲಿ ರೈಲು ವೆಲ್ಡಿಂಗ್ ಬಿಟ್ಟಿದ್ದ ಸ್ಥಳಕ್ಕೆ ಬರುವುದರಲ್ಲಿತ್ತು. ತಡ ಮಾಡದ ಮಹಾದೇವ, ಹಳಿ ಮೇಲೆ ಓಡಿ ಐದು ನಿಮಿಷದಲ್ಲಿ ಅರ್ಧ ಕಿ.ಮೀ. ಕ್ರಮಿಸಿ ರೈಲಿಗೆ ನಿಲ್ಲುವಂತೆ ಸೂಚನೆ ನೀಡಿದರು. ಇದರಿಂದ ಸಂಭಾವ್ಯ ಅಪಾಯ ತಪ್ಪಿತು. ಸಿಬ್ಬಂದಿ ಹಳಿ ಜೋಡಣೆ ಬಿಟ್ಟಿದ್ದ ಸ್ಥಳದಲ್ಲಿ ವೆಲ್ಡಿಂಗ್ ಮಾಡಿದ ನಂತರ ರೈಲು ಕಾರವಾರದ ಕಡೆಗೆ ಪ್ರಯಾಣ ಬೆಳೆಸಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…