ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಅವರಿಗೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಕಲೆ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ. ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್ ಶೆಟ್ಟಿ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಶೆಟ್ಟಿ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ ಜಯಕರ ಶೆಟ್ಟಿ ಎಂ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಮಂತ್ರಿ ಡಾ. ಎಂ ಸಿ ಸುಧಾಕರ್, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಯ ಅಧ್ಯಕ್ಷ ಪ್ರೊ ದೀಪಕ್ ಕುಮಾರ್ ಶ್ರಿವಾತ್ಸವರವರುಗಳು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…