ಜನ ಮನದ ನಾಡಿ ಮಿಡಿತ

Advertisement

ಸ್ಪೀಕರ್ ಖಾದರ್ ನೀಡಿದ “ಗಂಡಬೇರುಂಡ” ಪಿನ್ ಧರಿಸಿ ಅಮೇರಿಕಾ ತೆರಳಿದ ಡಿಸಿಎಂ ಡಿಕೆಶಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಅಮೇರಿಕಾಕ್ಕೆ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಎಲ್ಲಾ ಶಾಸಕರಿಗೆ ಮೇಲ್ವಸ್ತ್ರದ ಮುಂಭಾಗ ಅಳವಡಿಸಲು ಸರಕಾರದ ಲಾಂಛನವಾದ “ಗಂಡಬೇರುಂಡ” ಪಿನ್ ನೀಡಿದ್ದರು. ಡಿಸಿಎಂ ಡಿಕೆಶಿ ಅವರು ಅಮೇರಿಕಾ ಭೇಟಿ ಸಂದರ್ಭ ಕೂಡಾ ಇದೇ ಪಿನ್ ಧರಿಸಿದ್ದರು. ಅಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ಡಿಕೆಶಿ ಕೋಟಿನಲ್ಲಿದ್ದ “ಗಂಡಬೇರುಂಡ” ಪಿನ್ ನ್ನು ಕುತೂಹಲದಿಂದ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ “ಗಂಡಬೇರುಂಡ” ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಲಾಂಛನವಾಗಿ ಕೂಡಾ ಮನ್ನಣೆ ಗಳಿಸಿದೆ. ಈ ಲಾಂಛನ ಈ ಬಾರಿಯ ವಿಧಾನಸಭೆಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರಣಕರ್ತರು. ವಿಧಾನಸೌಧದಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವ ಖಾದರ್, ವಿಧಾನಸೌಧದ ತುಂಬಾ ಗಂಡಬೇರುಂಡ ಆಕೃತಿಯ ಗಡಿಯಾರಗಳನ್ನು ಅಳವಡಿಸಿದ್ದಾರೆ. ರಾಜ್ಯದ ಎಲ್ಲಾ ಶಾಸಕರಿಗೆ ಸದನದಲ್ಲಿ ಧರಿಸಲು “ಗಂಡಬೇರುಂಡ” ಪಿನ್ ನೀಡಿದ್ದಾರೆ.

ಬಹುತೇಕ ಶಾಸಕರು ಈ ಪಿನ್ ನ್ನು ನಮ್ಮ ರಾಜ್ಯದ ಹೆಮ್ಮೆ ಎಂಬಂತೆ ಸಾರ್ವಜನಿಕ ರಂಗದಲ್ಲೂ ಅಳವಡಿಸಿ ಗೌರವ ನೀಡುತ್ತಿದ್ದಾರೆ. ಡಿಸಿಎಂ ಡಿಕೆಶಿ ಅವರು ಒಂದು ಹೆಜ್ಜೆ ಮುಂದೆ ಹೋಗಿ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲೂ ಪ್ರದರ್ಶಿಸುತ್ತಿರುವುದು ಶ್ಲಾಘನೀಯ. ರಾಹುಲ್ ಗಾಂಧಿ ಕೂಡಾ ಈ ನಡೆಯನ್ನು ಸ್ವಾಗತಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!