ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಅಮೇರಿಕಾಕ್ಕೆ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಎಲ್ಲಾ ಶಾಸಕರಿಗೆ ಮೇಲ್ವಸ್ತ್ರದ ಮುಂಭಾಗ ಅಳವಡಿಸಲು ಸರಕಾರದ ಲಾಂಛನವಾದ “ಗಂಡಬೇರುಂಡ” ಪಿನ್ ನೀಡಿದ್ದರು. ಡಿಸಿಎಂ ಡಿಕೆಶಿ ಅವರು ಅಮೇರಿಕಾ ಭೇಟಿ ಸಂದರ್ಭ ಕೂಡಾ ಇದೇ ಪಿನ್ ಧರಿಸಿದ್ದರು. ಅಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ಡಿಕೆಶಿ ಕೋಟಿನಲ್ಲಿದ್ದ “ಗಂಡಬೇರುಂಡ” ಪಿನ್ ನ್ನು ಕುತೂಹಲದಿಂದ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ “ಗಂಡಬೇರುಂಡ” ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಲಾಂಛನವಾಗಿ ಕೂಡಾ ಮನ್ನಣೆ ಗಳಿಸಿದೆ. ಈ ಲಾಂಛನ ಈ ಬಾರಿಯ ವಿಧಾನಸಭೆಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರಣಕರ್ತರು. ವಿಧಾನಸೌಧದಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವ ಖಾದರ್, ವಿಧಾನಸೌಧದ ತುಂಬಾ ಗಂಡಬೇರುಂಡ ಆಕೃತಿಯ ಗಡಿಯಾರಗಳನ್ನು ಅಳವಡಿಸಿದ್ದಾರೆ. ರಾಜ್ಯದ ಎಲ್ಲಾ ಶಾಸಕರಿಗೆ ಸದನದಲ್ಲಿ ಧರಿಸಲು “ಗಂಡಬೇರುಂಡ” ಪಿನ್ ನೀಡಿದ್ದಾರೆ.
ಬಹುತೇಕ ಶಾಸಕರು ಈ ಪಿನ್ ನ್ನು ನಮ್ಮ ರಾಜ್ಯದ ಹೆಮ್ಮೆ ಎಂಬಂತೆ ಸಾರ್ವಜನಿಕ ರಂಗದಲ್ಲೂ ಅಳವಡಿಸಿ ಗೌರವ ನೀಡುತ್ತಿದ್ದಾರೆ. ಡಿಸಿಎಂ ಡಿಕೆಶಿ ಅವರು ಒಂದು ಹೆಜ್ಜೆ ಮುಂದೆ ಹೋಗಿ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲೂ ಪ್ರದರ್ಶಿಸುತ್ತಿರುವುದು ಶ್ಲಾಘನೀಯ. ರಾಹುಲ್ ಗಾಂಧಿ ಕೂಡಾ ಈ ನಡೆಯನ್ನು ಸ್ವಾಗತಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…