ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ನಿ ಸಮೇತ ಅಮೇರಿಕಾಕ್ಕೆ ಖಾಸಗಿ ಪ್ರವಾಸ ಕೈಗೊಂಡಿದ್ದಾರೆ. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಎಲ್ಲಾ ಶಾಸಕರಿಗೆ ಮೇಲ್ವಸ್ತ್ರದ ಮುಂಭಾಗ ಅಳವಡಿಸಲು ಸರಕಾರದ ಲಾಂಛನವಾದ “ಗಂಡಬೇರುಂಡ” ಪಿನ್ ನೀಡಿದ್ದರು. ಡಿಸಿಎಂ ಡಿಕೆಶಿ ಅವರು ಅಮೇರಿಕಾ ಭೇಟಿ ಸಂದರ್ಭ ಕೂಡಾ ಇದೇ ಪಿನ್ ಧರಿಸಿದ್ದರು. ಅಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ಡಿಕೆಶಿ ಕೋಟಿನಲ್ಲಿದ್ದ “ಗಂಡಬೇರುಂಡ” ಪಿನ್ ನ್ನು ಕುತೂಹಲದಿಂದ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ “ಗಂಡಬೇರುಂಡ” ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಲಾಂಛನವಾಗಿ ಕೂಡಾ ಮನ್ನಣೆ ಗಳಿಸಿದೆ. ಈ ಲಾಂಛನ ಈ ಬಾರಿಯ ವಿಧಾನಸಭೆಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರಣಕರ್ತರು. ವಿಧಾನಸೌಧದಲ್ಲಿ ಅಮೂಲಾಗ್ರ ಬದಲಾವಣೆ ತಂದಿರುವ ಖಾದರ್, ವಿಧಾನಸೌಧದ ತುಂಬಾ ಗಂಡಬೇರುಂಡ ಆಕೃತಿಯ ಗಡಿಯಾರಗಳನ್ನು ಅಳವಡಿಸಿದ್ದಾರೆ. ರಾಜ್ಯದ ಎಲ್ಲಾ ಶಾಸಕರಿಗೆ ಸದನದಲ್ಲಿ ಧರಿಸಲು “ಗಂಡಬೇರುಂಡ” ಪಿನ್ ನೀಡಿದ್ದಾರೆ.
ಬಹುತೇಕ ಶಾಸಕರು ಈ ಪಿನ್ ನ್ನು ನಮ್ಮ ರಾಜ್ಯದ ಹೆಮ್ಮೆ ಎಂಬಂತೆ ಸಾರ್ವಜನಿಕ ರಂಗದಲ್ಲೂ ಅಳವಡಿಸಿ ಗೌರವ ನೀಡುತ್ತಿದ್ದಾರೆ. ಡಿಸಿಎಂ ಡಿಕೆಶಿ ಅವರು ಒಂದು ಹೆಜ್ಜೆ ಮುಂದೆ ಹೋಗಿ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲೂ ಪ್ರದರ್ಶಿಸುತ್ತಿರುವುದು ಶ್ಲಾಘನೀಯ. ರಾಹುಲ್ ಗಾಂಧಿ ಕೂಡಾ ಈ ನಡೆಯನ್ನು ಸ್ವಾಗತಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…