ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು.

ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ‌ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!