ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…