ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…