ವ್ಯಕ್ತಿಗೆ ಕೋಪ ಬರುವುದು ಸಹಜ. ಆದ್ರೆ ಅದು ತಕ್ಷಣಕ್ಕೆ ಮಾತ್ರ ಇರಬೇಕು. ಮನುಷ್ಯ ಯಾವತ್ತೂ ದೀರ್ಘ ದ್ವೇಷಿ ಆಗಿರಬಾರದು. ಈ ಸಾಮರಸ್ಯ ಜೀವನದಲ್ಲಿ ಇದ್ದಾಗ ಬಾಂಧವ್ಯ ಸದಾ ಗಟ್ಟಿಯಾಗಿರುತ್ತದೆ ಎಂದು ಯಕ್ಷಗುರು ಸಂಜೀವ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿ ಬುಡ್ನಾರ್ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಆಯೋಜಿಸಿದ “ಸಂಜೀವ-70 ಗುರು ಶಿಷ್ಯರ ಸಂವಾದ”ದಲ್ಲಿ ತಮ್ಮ ಯಕ್ಷಗಾನ ಜೀವನದ ಸಂಗತಿಗಳನ್ನು ಹಂಚಿಕೊಂಡರು.
ನನ್ನ ಹುಟ್ಟು ಹಾಗೂ ಬದುಕು ವಿಚಿತ್ರವೇ ಆಗಿದೆ. ಬೇರೆಯವರಿಂದ ಪಡೆದದ್ದೇ ಹೆಚ್ಚು ಸಮಾಜಕ್ಕೆ ನೀಡಿದ್ದು ಕಡಿಮೆ. ಸಮಾಜದಲ್ಲಿ ಕಂಡು ಕಲಿಯಬೇಕು ಹಾಗೂ ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವುದು ನನ್ನ ಅನಿಸಿಕೆ. ಯಕ್ಷಗಾನ ಕೇಂದ್ರ ಹಾಗೂ ಗುರು ಶಿವರಾಮ ಕಾರಂತರಿಂದ ದೇಶದ ಕಲೆಗಳ ಪರಿಚಯವಾಯಿತು. ಆರ್ ಎಸ್ ಎಸ್ ಬಾಲ್ಯದಿಂದ ಕಲಿಸಿದ ಸಂಸ್ಕಾರ, ನೀತಿಪಾಠ ಹಲವು ರೀತಿಯಲ್ಲಿ ಅನುಕೂಲವಾಗಿದೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಯಕ್ಷಗಾನ ಕರಾವಳಿಯ ಗಂಡುಕಲೆ. ಇದೀಗ ದೇಶವ್ಯಾಪಿ ಹಬ್ಬಿದೆ. ಸನಾತನ ಸಂಸ್ಕೃತಿ, ಆಚಾರ, ವಿಚಾರ ಯಕ್ಷಗಾನದ ಮೂಲಕ ತಿಳಿಸಲಾಗುತ್ತಿದೆ. ಈ ಕ್ಷೇತ್ರದಲ್ಲಿ ಸಂಜೀವ ಸುವರ್ಣರ ಸಾಧನೆ ಶ್ಲಾಘನೀಯ ಎಂದರು. ವೈದ್ಯ ಡಾ. ಭಾಸ್ಕರಾನಂದ ಕುಮಾರ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಂಜೀವ ಸುವರ್ಣರ ಪತ್ನಿ ವೇದಾವತಿ ಸುವರ್ಣ ಉಪಸ್ಥಿತರಿದ್ದರು. ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿದರು. ಪಶುವೈದ್ಯ ಡಾ. ಪ್ರಶಾಂತ್ ಶೆಟ್ಟಿ ನಿರೂಪಿಸಿ, ವಂದಿಸಿದರು
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…