ಮೂಡುಬಿದಿರೆ: ಆತ್ಮಹತ್ಯೆ ಎಂಬುದು ಒಂದು ಸೂಕ್ಷ್ಮ ವಿಚಾರ. ಅತೀವ ಮಾನಸಿಕ ಒತ್ತಡ ಅಥವಾ ಸಹಿಸಲಾಗದ ವೇದನೆ ಉಂಟಾದಾಗ ಆತ್ಮಹತ್ಯೆಯಂತಹ ಆಘಾತಕಾರಿ ವಿಚಾರವನ್ನು ಮನಸ್ಸು ಪ್ರಚೋದಿಸುವುದು. ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯವು ವ್ಯಕ್ತಿಯೊಬ್ಬನಿಗೆ ಬಹುಮುಖ್ಯ. ದೈನಂದಿನ ಜೀವನದಲ್ಲಿ ನಿರಾಸಕ್ತಿ, ಬದುಕಿನ ಹತಾಶೆ, ಖಿನ್ನತೆಗಳಿಗೆ ಒಳಗಾಗದಂತೆ ಬೇರೆ ಬೇರೆ ಚಟುವಟಿಕೆ, ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು. ಮನಸ್ಸು ಸದಾ ಲವಲವಿಕೆಯಿಂದ ಇದ್ದರೆ ಯಾವುದೇ ವಿನಾಶಕಾರಿ ಯೋಚನೆ ಹತ್ತಿರ ಎಂದು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಹೇಳಿದರು.
ಶ್ರೀ ಮಹಾವೀರ ಕಾಲೇಜಿನ ಐ.ಕ್ಯೂ.ಎ.ಸಿ., ಎನ್.ಸಿ.ಸಿ. ಎನ್.ಎಸ್.ಎಸ್ ಘಟಕಗಳು ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಆತ್ಮಹತ್ಯೆಯ ನಿರೂಪಣೆಯನ್ನು ಬದಲಿಸುವುದು”ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತಿದೆ.ಆತ್ಮಹತ್ಯೆಯ ಗಂಭೀರತೆಯನ್ನು ತಿಳಿಸಿ, ಭರವಸೆಯನ್ನು, ಬೆಂಬಲವನ್ನು ಪರಿಣಾಮಕಾರಿಯಾಗಿ ಪಸರಿಸಿದಾಗ ಸ್ವಾಸ್ಥ್ಯ ಸಮಾಜವನ್ನು ಮತ್ತು ಆತ್ಮಹತ್ಯೆ ಶೂನ್ಯತೆಯ ಸಮುದಾಯವನ್ನು ನಿರ್ಮಿಸಲು ಸಾಧ್ಯ.
ಆತ್ಮಹತ್ಯೆ ಒಂದು ಕಳಂಕ ಅಲ್ಲ ಆದರೆ ಅದು ಇಡೀ ಕುಟುಂಬವನ್ನು ಮಾತ್ರವಲ್ಲದೆ ಸಮಾಜವನ್ನೇ ಬಾಧಿಸುತ್ತದೆ. ಒಂದು ವೇಳೆ ಮಾನಸಿಕ ಒತ್ತಡಗಳಿಗೆ ಒಳಗಾದ ಸಂದರ್ಭ ಬಂದರೆ ಆಪ್ತಸಮಾಲೋಚಕರ, ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಅಂತಹವರಿಗೆ ಸಾಮಾಜಿಕ ಬೆಂಬಲವನ್ನು ನೀಡಬೇಕು. ಪ್ರಸ್ತುತ ದಿನಗಳಲ್ಲಿ ನವ ಮಾಧ್ಯಮಗಳ ಪ್ರಭಾವವೋ ಏನೋ ಯುವಕರೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅವರು ವಿಷಾದಿಸಿದರು.
ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ. ಹರಿಶ್, ಎನ್.ಸಿ.ಸಿ ಅಧಿಕಾರಿ ವಿಜಯಲಕ್ಷ್ಮೀ ಎನ್.ಎಸ್.ಎಸ್. ಅಧಿಕಾರಿ ಶಾರದಾ ಉಪಸ್ಧಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…