ಕರಾವಳಿ

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಮೂಡುಬಿದಿರೆ: ಆತ್ಮಹತ್ಯೆ ಎಂಬುದು ಒಂದು ಸೂಕ್ಷ್ಮ ವಿಚಾರ. ಅತೀವ ಮಾನಸಿಕ ಒತ್ತಡ ಅಥವಾ ಸಹಿಸಲಾಗದ ವೇದನೆ ಉಂಟಾದಾಗ ಆತ್ಮಹತ್ಯೆಯಂತಹ ಆಘಾತಕಾರಿ ವಿಚಾರವನ್ನು ಮನಸ್ಸು ಪ್ರಚೋದಿಸುವುದು. ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯವು ವ್ಯಕ್ತಿಯೊಬ್ಬನಿಗೆ ಬಹುಮುಖ್ಯ. ದೈನಂದಿನ ಜೀವನದಲ್ಲಿ ನಿರಾಸಕ್ತಿ, ಬದುಕಿನ ಹತಾಶೆ, ಖಿನ್ನತೆಗಳಿಗೆ ಒಳಗಾಗದಂತೆ ಬೇರೆ ಬೇರೆ ಚಟುವಟಿಕೆ, ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು. ಮನಸ್ಸು ಸದಾ ಲವಲವಿಕೆಯಿಂದ ಇದ್ದರೆ ಯಾವುದೇ ವಿನಾಶಕಾರಿ ಯೋಚನೆ ಹತ್ತಿರ ಎಂದು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಹೇಳಿದರು.

ಶ್ರೀ ಮಹಾವೀರ ಕಾಲೇಜಿನ ಐ.ಕ್ಯೂ.ಎ.ಸಿ., ಎನ್.ಸಿ.ಸಿ. ಎನ್.ಎಸ್.ಎಸ್ ಘಟಕಗಳು ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ನಡೆದ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.
“ಆತ್ಮಹತ್ಯೆಯ ನಿರೂಪಣೆಯನ್ನು ಬದಲಿಸುವುದು”ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತಿದೆ.ಆತ್ಮಹತ್ಯೆಯ ಗಂಭೀರತೆಯನ್ನು ತಿಳಿಸಿ, ಭರವಸೆಯನ್ನು, ಬೆಂಬಲವನ್ನು ಪರಿಣಾಮಕಾರಿಯಾಗಿ ಪಸರಿಸಿದಾಗ ಸ್ವಾಸ್ಥ್ಯ ಸಮಾಜವನ್ನು ಮತ್ತು ಆತ್ಮಹತ್ಯೆ ಶೂನ್ಯತೆಯ ಸಮುದಾಯವನ್ನು ನಿರ್ಮಿಸಲು ಸಾಧ್ಯ.
ಆತ್ಮಹತ್ಯೆ ಒಂದು ಕಳಂಕ ಅಲ್ಲ ಆದರೆ ಅದು ಇಡೀ ಕುಟುಂಬವನ್ನು ಮಾತ್ರವಲ್ಲದೆ ಸಮಾಜವನ್ನೇ ಬಾಧಿಸುತ್ತದೆ. ಒಂದು ವೇಳೆ ಮಾನಸಿಕ ಒತ್ತಡಗಳಿಗೆ ಒಳಗಾದ ಸಂದರ್ಭ ಬಂದರೆ ಆಪ್ತಸಮಾಲೋಚಕರ, ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಅಂತಹವರಿಗೆ ಸಾಮಾಜಿಕ ಬೆಂಬಲವನ್ನು ನೀಡಬೇಕು. ಪ್ರಸ್ತುತ ದಿನಗಳಲ್ಲಿ ನವ ಮಾಧ್ಯಮಗಳ ಪ್ರಭಾವವೋ ಏನೋ ಯುವಕರೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅವರು ವಿಷಾದಿಸಿದರು.
ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೋ. ಹರಿಶ್, ಎನ್.ಸಿ.ಸಿ ಅಧಿಕಾರಿ ವಿಜಯಲಕ್ಷ್ಮೀ ಎನ್.ಎಸ್.ಎಸ್. ಅಧಿಕಾರಿ ಶಾರದಾ ಉಪಸ್ಧಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…

18 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…

18 hours ago

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…

18 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

18 hours ago

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…

18 hours ago

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

2 days ago