ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ.
ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ ಮನೆಯ ಹೊರಗಡೆಯಲ್ಲುದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದರೆನ್ನಲಾಗಿದೆ.
ತಕ್ಷಣ ಸ್ಥಳದಲ್ಲಿದ್ದವರು ಗಾಯಾಳುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ರವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…