ಜನ ಮನದ ನಾಡಿ ಮಿಡಿತ

Advertisement

ಪಡುಕೋಣಾಜೆ ಸರ್ಕಾರಿ ಶಾಲೆಯಲ್ಲಿ ಬಾಲಕ ಬಾಲಕಿಯರ ತಾಲೂಕು ಮಟ್ಟದ ಥ್ರೂ ಬಾಲ್ ಪಂದ್ಯಾಟದ ಫಲಿತಾಂಶ ಪ್ರಕಟ

ದಕ್ಷಿಣ ಕನ್ನಡ : ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದ್ರೆ, ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ, ಹಾಗೂ ಇತರರ ಸಹಕಾರದೊಂದಿಗೆ ಪಂದ್ಯಾಟವನ್ನು ಏರ್ಪಡಿಸಲಾಗಿದ್ದು, ಯಾವುದೇ ಅಡಚಣೆಗಳಿಲ್ಲದೆ, ಮಳೆರಾಯನ ಬಿಡುವಿನೊಂದಿಗೆ ಪಂದ್ಯಾಟ ಉತ್ತಮವಾಗಿ ಮೂಡಿ ಬಂತು. ಸಂಜೆ ವೇಳೆಗೆ ಪಂದ್ಯದ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಹಮ್ಮದೀಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

 


ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ಪ್ರಥಮ, ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆ ಬೆಳುವಾಯಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆ ಪುತ್ತಿಗೆ ಪ್ರಥಮ ಹಾಗೂ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಶಿರ್ಥಾಡಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮೂಡುಕೋಣಜೆ ಪ್ರಥಮ ಸ್ಥಾನವನ್ನು ಪಡೆದಿದ್ದು ಮಹಮ್ಮದ್ ಯ ಆಂಗ್ಲ ಮಾಧ್ಯಮ ಶಾಲೆ, ಕೋಟೆ ಬಾಗಿಲು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.  ತೀರ್ಪುಗಾರರಾಗಿ ನವೀನ್ ಅಂಬೂರಿ ಆಗಮಿಸಿದ್ದರು. ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಸ್ಥಳೀಯ ಪಂಚಾಯಿತ್ ಸದಸ್ಯ ಸಂತೋಷ್ ಶೆಟ್ಟಿ, ಸ್ಥಳೀಯ ಪಂಚಾಯಿತಿ ಸದಸ್ಯೆ ಲತಾ ಹೆಗ್ಡೆ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ ಸಹಿತ ಹಲವರು ಪಾಲ್ಗೊಂಡಿದ್ದು, ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಭಾಷಾ ಶಿಕ್ಷಕಿ ಅನ್ನಪೂರ್ಣೇಶ್ವರಿ ನೆರವೇರಿಸಿದ್ದು, ವಂದನಾರ್ಪಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕರು ಜಯಶ್ರೀ ನೆರವೇರಿಸಿದರು.

 

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!