ಜನ ಮನದ ನಾಡಿ ಮಿಡಿತ

Advertisement

ಹನಗೋಡು ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ; ಪಿಡಿಒ ವರ್ಗಾವಣೆಗೆ ಆಗ್ರಹ…!!!!

ಹನಗೋಡು ಗ್ರಾಮ ಪಂಚಾಯಿತಿ ಪಿಡಿಒ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರನ್ನು ಬೇರೇಡೆಗೆ ವರ್ಗಾಹಿಸುವಂತೆ ಆಗ್ರಹಿಸಿ ಗ್ರಾಪಂ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಪಿಡಿಒ ಅನಿತಾ ಅವರು ಇಲ್ಲಿಗೆ ಬಂದು ವರ್ಷವಾದರೂ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ, ಅಧ್ಯಕ್ಷರು, ಸದಸ್ಯರಿಗೆ ಅಗೌರವದಿಂದ ನಡೆದುಕೊಂಡು ಉಡಾಫೆ ಮಾತುಗಳನ್ನಾಡುತ್ತಾರೆ. ಇಂತಹ ಅಧಿಕಾರಿ ಯಿಂದ ಗ್ರಾಪಂನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾ ಗುತ್ತಿಲ್ಲ, ಸಾರ್ವಜನಿಕರು ದಿನನಿತ್ಯ ಕಚೇರಿಗೆ ಬಂದು ತಮ್ಮ ಕೆಲಸವಾಗದೆ ಹಿಡಿಶಾಪ ಹಾಕಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.

ಹನಗೋಡು ಗ್ರಾಪಂ ಪಿಡಿಒ ವಿರುದ್ಧ ಸದಸ್ಯರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಇಒ ಹೊಂಗಯ್ಯ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ನಂತರ ಹೊಂಗಯ್ಯ ಗ್ರಾಪಂಗೆ ಭೇಟಿ ನೀಡಿ ಪ್ರತಿಭಟನಾನಿರತ ಆಡಳಿತ ಮಂಡಳಿಯವರ ಮನವೊಲಿಸಿ ಕಚೇರಿಯ ಬೀಗ ತೆರವುಗೊಳಿಸಿ ಆಡಳಿತ ಮಂಡಳಿಯವರೊಂದಿಗೆ ಪ್ರತ್ಯೇಶ್ ಸಭೆ ನಡೆಸಿದರು. ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪಿಡಿಒಗೆ ಇಒ ಸೂಚನೆ ನೀಡಿದರು. ಇದಲ್ಲದೆ ಅಧ್ಯಕ್ಷರು ಹಾಗೂ ಸದಸ್ಯರು ನೀಡಿರುವ ಮನವಿಯನ್ನು ಕೂಡಲೇ ಜಿಪಂ ಸಿಇಒ ಗೆ ತಲುಪಿಸಲಾಗುವುದು. ಅಲ್ಲಿಯವರೆವಿಗೂ ಕಾಲಾವಕಾಶ ನೀಡಿ ಗ್ರಾ.ಪಂ.ನ ಕೆಲಸ ಕಾರ್ಯ ನಡೆಸಲು ಅವಕಾಶ ಮಾಡಿಕೊಡಿ, ನಾನು ಕೂಡ ಹನಗೋಡು ಗ್ರಾ.ಪಂ.ಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಇಒ ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಹಿಂಪಡೆದರು.

ವೇಳೆ ತಾಲೂಕು ಪಿಡಿಒ ಸಂಘದ ಅಧ್ಯಕ್ಷ ರಾಮಣ್ಣ ಇದ್ದರು. ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಶಿವಣ್ಣ, ಸಂತೋಷ್, ರತ್ನಶ್ರೀಧರ್, ಛಾಯಾನಾಗೇಗೌಡ, ಸಂಗೀತಾ ಸುರೇಶ್, ಪವಿತ್ರಾ, ಬೋರೇಗೌಡ, ಈಶ್ವರ್, ಮಾದೇವ ನಾಯ್ಕ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮಾಂತರ ಪೋಲಿಸರು ಬಂದೋಬಸ್ತುವಹಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!