ಹನಗೋಡು ಗ್ರಾಮ ಪಂಚಾಯಿತಿ ಪಿಡಿಒ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರನ್ನು ಬೇರೇಡೆಗೆ ವರ್ಗಾಹಿಸುವಂತೆ ಆಗ್ರಹಿಸಿ ಗ್ರಾಪಂ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿದರು.
ಪಂಚಾಯಿತಿ ಅಧ್ಯಕ್ಷ ಚನ್ನಯ್ಯ ಮಾತನಾಡಿ, ಪಿಡಿಒ ಅನಿತಾ ಅವರು ಇಲ್ಲಿಗೆ ಬಂದು ವರ್ಷವಾದರೂ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳ ಕಡೆ ಗಮನ ಹರಿಸಿಲ್ಲ, ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ, ಅಧ್ಯಕ್ಷರು, ಸದಸ್ಯರಿಗೆ ಅಗೌರವದಿಂದ ನಡೆದುಕೊಂಡು ಉಡಾಫೆ ಮಾತುಗಳನ್ನಾಡುತ್ತಾರೆ. ಇಂತಹ ಅಧಿಕಾರಿ ಯಿಂದ ಗ್ರಾಪಂನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾ ಗುತ್ತಿಲ್ಲ, ಸಾರ್ವಜನಿಕರು ದಿನನಿತ್ಯ ಕಚೇರಿಗೆ ಬಂದು ತಮ್ಮ ಕೆಲಸವಾಗದೆ ಹಿಡಿಶಾಪ ಹಾಕಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.
ಹನಗೋಡು ಗ್ರಾಪಂ ಪಿಡಿಒ ವಿರುದ್ಧ ಸದಸ್ಯರು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಇಒ ಹೊಂಗಯ್ಯ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ನಂತರ ಹೊಂಗಯ್ಯ ಗ್ರಾಪಂಗೆ ಭೇಟಿ ನೀಡಿ ಪ್ರತಿಭಟನಾನಿರತ ಆಡಳಿತ ಮಂಡಳಿಯವರ ಮನವೊಲಿಸಿ ಕಚೇರಿಯ ಬೀಗ ತೆರವುಗೊಳಿಸಿ ಆಡಳಿತ ಮಂಡಳಿಯವರೊಂದಿಗೆ ಪ್ರತ್ಯೇಶ್ ಸಭೆ ನಡೆಸಿದರು. ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪಿಡಿಒಗೆ ಇಒ ಸೂಚನೆ ನೀಡಿದರು. ಇದಲ್ಲದೆ ಅಧ್ಯಕ್ಷರು ಹಾಗೂ ಸದಸ್ಯರು ನೀಡಿರುವ ಮನವಿಯನ್ನು ಕೂಡಲೇ ಜಿಪಂ ಸಿಇಒ ಗೆ ತಲುಪಿಸಲಾಗುವುದು. ಅಲ್ಲಿಯವರೆವಿಗೂ ಕಾಲಾವಕಾಶ ನೀಡಿ ಗ್ರಾ.ಪಂ.ನ ಕೆಲಸ ಕಾರ್ಯ ನಡೆಸಲು ಅವಕಾಶ ಮಾಡಿಕೊಡಿ, ನಾನು ಕೂಡ ಹನಗೋಡು ಗ್ರಾ.ಪಂ.ಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಇಒ ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಹಿಂಪಡೆದರು.
ವೇಳೆ ತಾಲೂಕು ಪಿಡಿಒ ಸಂಘದ ಅಧ್ಯಕ್ಷ ರಾಮಣ್ಣ ಇದ್ದರು. ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಶಿವಣ್ಣ, ಸಂತೋಷ್, ರತ್ನಶ್ರೀಧರ್, ಛಾಯಾನಾಗೇಗೌಡ, ಸಂಗೀತಾ ಸುರೇಶ್, ಪವಿತ್ರಾ, ಬೋರೇಗೌಡ, ಈಶ್ವರ್, ಮಾದೇವ ನಾಯ್ಕ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮಾಂತರ ಪೋಲಿಸರು ಬಂದೋಬಸ್ತುವಹಿಸಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…