ಜನ ಮನದ ನಾಡಿ ಮಿಡಿತ

Advertisement

ಐದು ವರ್ಷಗಳ ಹಿಂದೆ ಮಹಿಳೆಯ ಹತ್ಯೆಗೈದು 29 ತುಂಡುಗಳಾಗಿ ಎಸೆದ ಪ್ರಕರಣ; ಮೂವರು ಆರೋಪಿಗಳು ದೋಷಿಗಳೆಂದು ಕೋರ್ಟ್ ತೀರ್ಪು

ನಗರದ ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್‌ ಅಂಗಡಿ ಇಟ್ಟುಕೊಂಡು, ಕುರಿಚಿಟ್‌ ಫಂಡ್‌ ವ್ಯವಹಾರ ನಡೆಸುತ್ತಿದ್ದ ಶ್ರೀಮತಿ ಶೆಟ್ಟಿ (37) ಅವರ ಕೊಲೆ ಪ್ರಕರಣದಲ್ಲಿ ಮೂವರನ್ನು ದೋಷಿಗಳೆಂದು ಇಲ್ಲಿಯ ನ್ಯಾಯಾಲಯ ಘೋಷಿಸಿದೆ.

ಸೆಮಿನರಿ ಕಂಪೌಂಡ್‌, ಅತ್ತಾವರ ನ್ಯೂರೋಡ್‌ ಕಂಕನಾಡಿಯ ಮೂಲ ನಿವಾಸಿಯಾಗಿರುವ ಜೋನಸ್‌ ಸ್ಯಾಮ್ಸನ್‌ ಅಲಿಯಾಸ್‌ ಜೋನಸ್‌ ಜೌಲಿನ್‌ ಸ್ಯಾಮ್ಸನ್‌, ಅವರ ಪತ್ನಿ ವೆಲೆನ್ಸಿಯಾದ ವಿಕ್ಟೋರಿಯಾ ಮಥಾಯಿಸ್‌ ಹಾಗೂ ಕುಂಜತ್‌ಬೈಲ್‌ ಮರಕಡ ಗ್ರಾಮ ತಾರಿಪಾಡಿ ಗುಡ್ಡೆಯ ರಾಜು ಘೋಷಿತ ಆರೋಪಿಗಳು. ಇವರಿಗೆ ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ.

ಜೋನಸ್‌ ಸ್ಯಾಮ್ಸನ್‌ ಕುರಿಚಿಟ್‌ ಫಂಡ್‌ನಲ್ಲಿ ಎರಡು ಸದಸ್ಯತ್ವ ಹೊಂದಿದ್ದ. ಅವಧಿಗೆ ಮೊದಲೇ ಎರಡೂ ಸದಸ್ಯತ್ವದ ಹಣವನ್ನು ಪಡೆದುಕೊಂಡಿದ್ದ. ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಕಂತು ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸಿದ್ದರು. 11.5.2019ರಂದು ಬೆಳಿಗ್ಗೆ ತಮ್ಮ ದ್ವಿಚಕ್ರವಾಹನದಲ್ಲಿ ಶ್ರೀಮತಿ ಶೆಟ್ಟಿ ಅವರು ಹಣ ಕೇಳಲು ಜೋನಸ್‌ ಸ್ಯಾಮ್ಸನ್‌ನ ಮನೆಗೆ ಹೋಗಿದ್ದರು. ಹಣ ಕೊಡದಿದ್ದುದಕ್ಕೆ ಶ್ರೀಮತಿ ಶೆಟ್ಟಿ ಅವರು ಬೈದಾಗ, ಜೋನಸ್‌ ಸ್ಯಾಮ್ಸನ್‌ ಕೋಪಗೊಂಡು ಮರದ ಪಟ್ಟಿಯ ತುಂಡಿನಿಂದ ಶ್ರೀಮತಿಅವರ ಹಣೆಗೆ ಹೊಡೆದಿದ್ದ. ಶ್ರೀಮತಿ ಅವರು ಅಲ್ಲಿಯೇ ನೆಲಕ್ಕೆ ಬಿದ್ದಿದ್ದರು. ಮುಖ, ಗಲ್ಲಕ್ಕೆ ಗುದ್ದಿದ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತನ್ನ ಪತ್ನಿ ವಿಕ್ಟೋರಿಯಾ ಮಥಾಯಿಸ್‌ಳೊಂದಿಗೆ ಮನೆ ಒಳಗೆ ಒಯ್ದು, ಮೈಮೇಲಿದ್ದ ಆಭರಣ ದೋಚಿ ನಂತರ ಕೊಲೆ ಮಾಡಿ ದೇಹವನ್ನು ತುಂಡು ತುಂಡು ಮಾಡಿ ನಗರದ ವಿವಿಧೆಡೆ ಎಸೆದಿದ್ದರು.

ಶ್ರೀಮತಿ ಅವರ ಮೈಮೇಲಿದ್ದ ಆಭರಣಗಳನ್ನು ಮರು ದಿನ ಗಂಡ– ಹೆಂಡತಿ ಇಬ್ಬರೂ 3ನೇ ಆರೋಪಿ ರಾಜುಗೆ ನೀಡಿದ್ದರು. ಕೊಲೆ ಮಾಡಿದ ವಿಷಯವನ್ನು ರಾಜುಗೆ ತಿಳಿಸಿದ್ದರೂ ರಾಜು, ಚಿನ್ನಾಭರಣ ಪಡೆದುಕೊಂಡು ಬಚ್ಚಿಟ್ಟಿದ್ದಲ್ಲದೇ ಅವರಿಗೆ ಆಶ್ರಯ ನೀಡಿದ್ದ.

ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹೇಶ್‌ ಎಂ. ಅವರು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವೆನ್ಲಾಕ್‌ ಆಸ್ಪತ್ರೆಯ ಫೊರೆನ್ಸಿಕ್‌ ವಿಭಾಗದ ವೈದ್ಯಾಧಿಕಾರಿ ಡಾ. ಜಗದೀಶ್‌ ರಾವ್‌ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು, ಈ ಮೂವರು ದೋಷಿತರು ಎಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲೆ ವಿಚಾರಣೆಯನ್ನು ಇದೇ 17ಕ್ಕೆ ನಿಗದಿ ಪಡಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ಅವರು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!