ಕರಾವಳಿ

ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆ; ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದ ಕಾರ್ಯಕರ್ತರು https://abhimatha.tv/news/16652/

ಮಂಗಳೂರು: ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗಕ್ಕೆ ಕಾರ್ಯಕರ್ತರ ಜೈಕಾರ ಘೋಷಣೆಯ ನಡುವೆ ಬಂದಿಳಿದ ಹಿಂದೂ ನಾಯಕ, ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯವಾಹ ಶರಣ್ ಪಂಪ್ ವೆಲ್,  ಜೈ ಕಾರ ಘೋಷಣೆ ಕೂಗಿದ ಕಾರ್ಯಕರ್ತರು ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸ ರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ಕಾರ್ಯಕರ್ತರಿಗೆ ತಡೆಯೊಡ್ಡಿದರು.

ಬಳಿಕ ಹೆದ್ದಾರಿಯಲ್ಲಿ ಕೆಲಹೊತ್ತು ಕಾರ್ಯಕರ್ತರು ಘೋಷಣೆ ಕೂಗಿದರು. ಶರಣ್ ಪಂಪ್ ವೆಲ್ಅವರಿಗೆ ಸವಾಲು ಹಾಕಿರುವ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ವಿರುದ್ದ ಘೋಷಣೆ ಕೂಗಿದರು.
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿಮಾತನಾಡಿ, ಬಿಸಿರೋಡಿನ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿಸಿರೋಡಿಗೆ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ,ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಜೊತೆಗೆ ಜೈಲಿಗೂ ಹೋಗಿದ್ದಾರೆ.ನಾಗಮಂಗಲದ ಗಣೇಶ ಚತುರ್ಥಿಯ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಿಂಸೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಹೇಳಿಕೆಯನ್ನು ಕೊಟ್ಟಿದ್ದೇವೆ.ಆದರೆ ಆತ ಅದಕ್ಕೆ ಬಿಸಿರೋಡಿಗೆ ಆಗಮಿಸುವಂತೆ ಸವಾಲು ಹಾಕಿದ್ದ. ಆತನ ಸವಾಲಿಗೆ ಉತ್ತರವಾಗಿ ನಾವು ಇಂದು ಬಿಸಿರೋಡಿನಲ್ಲಿ ಸೇರಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ. ಇದು ಶರಣ್ ಒಬ್ಬನಿ್ಗೆ ಹಾಕಿದ ಸಾವಲು ಅಲ್ಲ‌ ಇಡೀ ಹಿಂದೂ ಕಾರ್ಯಕರ್ತರಿಗೆ ಹಾಕಿದ ಸವಾಲು ಎಂದು ಅವರು ತಿಳಿಸಿದರು.ಯಾರಿಗೂ ಆಹ್ವಾನ ನೀಡದೆ ತಾವೆಲ್ಲರೂ ಆಗಮಿಸಿದ್ದಕ್ಕೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದರು.
ಸವಾಲಿಗೆ ಪ್ರತಿ ಸವಾಲು ಹಾಕಿದ್ದ ಹಿಂದೂ ಸಂಘಟನೆಯ ಪ್ರಮುಖ ಪುನೀತ್ ಅತ್ತಾವರ ಕೂಡ ಬಿಸಿರೋಡಿನ ಚಲೋ ಕಾರ್ಯಕ್ರಮದಲ್ಲಿ ಶರಣ್ ಪಂಪ್ ವೆಲ್ ಜೊತೆ ಆಗಮಿಸಿದ್ದರು.
ಐಜಿಪಿ ಅಮಿತ್ ಸಿಂಗ್,ಎಸ್.ಪಿ.ಯತೀಶ್ ಎನ್ .ಎ.ಸಿ.ಹರ್ಷವರ್ದನ್, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು‌

ಹೆಚ್ಚುವರಿ ಪೊಲೀಸರ ನಿಯೋಜನೆ  

ಹಿಂದೂ ಸಂಘಟನೆಯ ಪ್ರಮುಖರಾದ ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ,ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಕ, ನವೀನ್ ಮೂಡುಶೆಡ್ಡೆ ಮತ್ತಿತರ ಪ್ರಮುಖರು ಹಾಜರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…

21 hours ago

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…

21 hours ago

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

3 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

3 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

3 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

4 days ago