ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್, ನಾಲ್ಕು ಕಾರು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ
ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಬಳಂಜ ಗ್ರಾಮದ ಗುಂಡೇರಿ ನಿವಾಸಿಯಾದ ವೀಕ್ಷಾ (17) ಎಂದು ಗುರುತಿಸಲಾಗಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ವೀಕ್ಷಾ ತನ್ನ ಸ್ನೇಹಿತೆಯೊಂದಿಗೆ ಕಂಪ್ಯೂಟರ್ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…