ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್, ನಾಲ್ಕು ಕಾರು, ಒಂದು ಆಟೋ ರಿಕ್ಷಾ ಮತ್ತು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ.
ಉಜಿರೆಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಎದುರಿನಿಂದ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿ
ಹೊಡೆದಿದೆ. ನಂತರ ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಎರಡನೆ ಬಾರಿ ಡಿಕ್ಕಿ ಹೊಡೆದ ರಭಸಕ್ಕೆ ಟಿಪ್ಪರ್ ಏಕಾಏಕಿ ಶೋರೂಂ ಕಡೆಗೆ ತಿರುಗಿ ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದು ಶೋರೂಂ ಎದುರು ನಿಲ್ಲಿಸಿದ್ದ ನಾಲ್ಕು ಕಾರು ಹಾಗೂ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಬಳಂಜ ಗ್ರಾಮದ ಗುಂಡೇರಿ ನಿವಾಸಿಯಾದ ವೀಕ್ಷಾ (17) ಎಂದು ಗುರುತಿಸಲಾಗಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ವೀಕ್ಷಾ ತನ್ನ ಸ್ನೇಹಿತೆಯೊಂದಿಗೆ ಕಂಪ್ಯೂಟರ್ ತರಗತಿಗೆ ಹಾಜರಾಗಲು ನಡೆದುಕೊಂಡು ಹೋಗುತ್ತಿದ್ದಳು. ಮತ್ತೋರ್ವ ಬಾಲಕಿ ಟಿಪ್ಪರ್ನ ಚಕ್ರದಡಿ ಸಿಲುಕಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಚಾಲಕ ಸುರೇಶ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…