ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು SP ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.
ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…