ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು SP ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.
ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…