ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು ಮತ್ತು ಸಂಪುಟ ಸದಸ್ಯರು ಬಸ್ ನಲ್ಲಿ ತೆರಳುವ ವೇಳೆ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಶಾಂತಮ್ಮ ಅವರ ಗೋಳಾಟ ನೋಡಿ ಮರುಗಿದ ಸಿಎಂ, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು SP ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು.
ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ಈ ವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…