ಜನ ಮನದ ನಾಡಿ ಮಿಡಿತ

Advertisement

ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು….!!

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.

ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.‌‌ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

 


ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!