ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.
ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.ಸೆ.16 ರಂದು ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.
ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…