ಮಂಗಳೂರು: ಮಂಗಳೂರಿನ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್ನಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿಸಮಿತಿಗೆ ತಲಾ ಏಳೇಳು ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…