ಮಂಗಳೂರು: ಮಂಗಳೂರಿನ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್ನಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿಸಮಿತಿಗೆ ತಲಾ ಏಳೇಳು ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…