ಮಂಗಳೂರು : ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಯವರ ಐಕಳದ ಮನೆಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳವಿನ ಬಳಿಕ ಈ ಆರೋಪಿಗಳು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಹೈಲ್ ಹಾಗೂ ಝುಬೈರ್ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಂ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಳೆದ ವರ್ಷ ಐಕಳದಲ್ಲಿರುವ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆಯಲ್ಲಿ ಕಳವು ಮಾಡಿದ್ದರು. ಬಳಿಕ ಕಾಸರಗೋಡು ನಿವಾಸಿ ಕಲಾಂನ ಸಹಕಾರ ಪಡೆದು ನಕಲಿ ಪಾಸ್ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ಪಲಾಯನ ಮಾಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿ, ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…