ಜನ ಮನದ ನಾಡಿ ಮಿಡಿತ

Advertisement

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…! 

ಕಾರವಾರ: ಶ್ರೀಮಂತ ಉದ್ಯಮಿ ವಿನಾಯಕ ನಾಯ್ಕ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು…!

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.

 

ಅಪರಿಚಿತರರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಾಕೆಯನ್ನ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ದಾರೆ, ಕೊಲೆಯ ಹಿಂದಿನ ಮರ್ಮ ಇನ್ನಷ್ಟೇ ತಿಳಿಯಬೇಕಿದೆ. ಇನ್ನು ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!