ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಹೀರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಾರಾಯಣ ಮಾಳಿಗೆ ಪಾಪಪ್ರಜ್ಞೆ ಕಾಡಿದ್ದು, “ನಂದು ತಪ್ಪಾಯ್ತು ನೀವೇ ನನ್ನ ಗುಂಡು ಹಾರಿಸಿ ಸಾಯಿಸಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುವೆ” ಎಂದು ಹೇಳಿರುವುದಾಗಿ ವರದಿಗಳಾಗಿವೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹಸನ್ ದಲಾಯತ್ ರನ್ನು ಪೊಲೀಸರು ಜು.17ರ ವರೆಗೆ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ನಾರಾಯಣ ಮಾಳಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದು, ಈ ರೀತಿ ನುಡಿದಿದ್ದಾನೆ ಎನ್ನಲಾಗಿದೆ. ಇಬ್ಬರು ಆರೋಪಿಗಳನ್ನೂ ಪೊಲೀಸರು ಪ್ರತ್ಯೇಕ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಜೈನ ಮುನಿಗಳ ಪರ್ಸನಲ್ ಡೈರಿಯನ್ನು ಸುಟ್ಟು ಹಾಕಿರುವುದಾಗಿಯೂ ಮಾಳಿ ಹೇಳಿದ್ದಾನೆ. ಆದರೆ, ಆ ಡೈರಿಯಲ್ಲಿ ಏನಿತ್ತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ.
ಈ ನಡುವೆ ನಾರಾಯಣ ಮಾಳಿ ಮನೆಗೆ ಪೊಲೀಸರು ಭಾರೀ ಭದ್ರತೆ ನೀಡಿದ್ದಾರೆ. 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಟುಂಬಸ್ಥ ರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಮನೆಯಲ್ಲಿರುವ 30ಕ್ಕೂ ಹೆಚ್ಚು ಜಾನುವಾರುಗಳಿಗೆ ಆರೈಕೆ ಮಾಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…