ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಏಳಿಂಜೆ ಶಾಂಭವಿ ನದಿಯಿಂದ ಅಕ್ರಮ ಮರಳು ಸಾಗಾಟ; ಟಿಪ್ಪರ್ ಪಲ್ಟಿ; ಸಿಕ್ಕಿ ಬಿದ್ದ ಆರೋಪಿಗಳು

ಮುಲ್ಕಿ :ಪೊಲೀಸ್‌ ಠಾಣಾ ವ್ಯಾಪ್ತಿಯ ಎಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು ಮುಲ್ಕಿ ಪೊಲೀಸರು ಪಟ್ಟೆ ಕ್ರಾಸ್ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಬಯಲಿಗೆ ಬಂದಿದ್ದು ಮರಳನ್ನು ಸಹಿತ ಕ್ರೇನ್ ಹಾಗೂ ಜೆಸಿಬಿಯನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.

ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನಂದಿನಿನದಿ ಬದಿಗೆ ಹಾದು ಹೋಗುವ ಕಚ್ಚಾ ಮಣ್ಣು ರಸ್ತೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 1 ಟಿಪ್ಪರ್ ಲಾರಿ ಲೋಡಿನಷ್ಟು ಸಾಮಾನ್ಯ ಮರಳು ಬಿದ್ದುಕೊಂಡಿದ್ದು ಸ್ಥಳದಲ್ಲಿದ್ದ ಕ್ರೇನ್ ನ ಅಪರೇಟರ್ ಜಬ್ಬರ್ ಬಳಿ ವಿಚಾರಿಸಿದಾಗ ಮರಳು ತುಂಬಿದ ಟಿಪ್ಪರ್ ಲಾರಿಯು ರಸ್ತೆ ಬದಿಗೆ ಬಿದ್ದಿರುವ ಬಗ್ಗೆ ಟಿಪ್ಪರ್ ಲಾರಿಯ ಮಾಲಕ ಸುಜಿತ್ ಎಂಬವರು ಕರೆ ಮಾಡಿದಂತೆ ತನ್ನ ಕ್ರೇನ್ ನಲ್ಲಿ ಟಿಪ್ಪರ್ ಲಾರಿಯನ್ನು ಮೇಲಕ್ಕೆತ್ತಲು ಕ್ರೇನ್ ಹಾಗೂ ಜೆಸಿಬಿ ಬಂದಿರುವುದಾಗಿ ತಿಳಿಸಿದ್ದಾನೆ.ಟಿಪ್ಪರ್ ಲಾರಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಆರೋಪಿಗಳಾದ ಸುಜಿತ್ ಮತ್ತು ಅಜಿತ್ ಎಂಬವರನ್ನು ವಿಚಾರಿಸಿದಾಗ ತಾವು ಪಕ್ಕದ ನದಿಯಿಂದ ಸಾಮಾನ್ಯ ಮರಳನ್ನು ತೆಗೆದು ಅದನ್ನು ಮಾರಾಟದ ಬಗ್ಗೆ KA-21-A-0647 ನಂಬ್ರದ ಟಿಪ್ಪರ್ ನಲ್ಲಿ ಸಾಗಾಟ ಮಾಡುತ್ತಿದ್ದಾಗ ರಾತ್ರಿ ಸುಮಾರು 9ಗಂಟೆಗೆ ಮಳೆಯ ಕಾರಣ ಟಯರ್ ಕೆಸರಿನಲ್ಲಿ ಹೂತು ಟಿಪ್ಪರ್ ಲಾರಿಯು ಪಲ್ಟಿಯಾಗಿದ್ದಾಗಿ, ಲಾರಿಯಲ್ಲಿ ತುಂಬಿಸಿದ್ದ ಮರಳು ಚೆಲ್ಲಿರುವುದಾಗಿ ತಿಳಿಸಿದ್ದಾರೆ.

ಎಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಎಂಬಲ್ಲಿ ಶಾಂಭವಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ನದಿಯಿಂದ ಸಾಮಾನ್ಯ ಮರಳನ್ನು ಕಳವು ಮಾಡಿ ಅದನ್ನು ಟಿಪ್ಪರ್ (KA-21-A-0647) ಲಾರಿಯಲ್ಲಿ ಮಾರಾಟದ ಬಗ್ಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಆರೋಪಿಗಳ ವಿರುದ್ಧ ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ನದಿ ತೀರದ ಪ್ರದೇಶಗಳಾದ ಬಳ್ಕುಂಜೆ,ಎಳಿಂಜೆ, ಮತ್ತಿತರ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು ಗಣಿ ಭೂ ವಿಜ್ಞಾನ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!