ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ಪ್ರಾರ್ಥನಾ ಮಂದಿರದ ಎದುರು ಭಾಗದ ಸರಕಾರಿ ಜಾಗದಲ್ಲಿ ಆವರಣ ಗೋಡೆ, ಸಹಿತ ವಿಶ್ರಾಂತಿ ತಂಗುದಾಣ ನಿರ್ಮಾಣ ಮಾಡಿದ್ದು ಸ್ಥಳೀಯರಾದ ಮೊಹಮ್ಮದ್ ಮತ್ತು ಶಬೀರ್ ಎಂಬವರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ನಗರ ಪಂಚಾಯತ್ ಸದಸ್ಯ ಪುತ್ತುಬಾವ ಮಾತನಾಡಿ ಅಕ್ರಮ ಆವರಣ ಗೋಡೆ ನಿರ್ಮಾಣದ ಬಗ್ಗೆ ಈಗಾಗಲೇ ಸ್ಥಳೀಯರು ನಗರ ಪಂಚಾಯತಿಗೆ ದೂರು ನೀಡಿದ್ದು ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…