ಜನ ಮನದ ನಾಡಿ ಮಿಡಿತ

Advertisement

ಭಾಷಾಭಿಮಾನದ ಮೂಲಕ ಬದುಕನ್ನು ಕಟ್ಟಿಕೊಳ್ಳೋಣ – ಡಾ. ಗಣಪಯ್ಯ ಭಟ್

ದಕ್ಷಿಣ ಕನ್ನಡ : ಶಿಕ್ಷಣವು ಜ್ಞಾನ ನೀಡುವುದರ ಜೊತೆಯಲ್ಲಿ ಬದುಕುವ ಕಲೆಯನ್ನು ಕಲಿಸುತ್ತದೆ. ಆಧುನಿಕ ಜಗತ್ತಿನ ಸವಾಲುಗಳ ಸುಳಿಯಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳುವುದರ ಮೂಲಕ ನಮ್ಮ ನಡೆ ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬಹುದು,ಬೆಳೆಸಿಕೊಳ್ಳಬಹುದು, ನಮ್ಮ ಅಧ್ಯಯನದ ಜೊತೆಯಲ್ಲಿ ಭಾಷಾಭಿಮಾನವನ್ನು ರೂಡಿಸಿಕೊಳ್ಳೋಣ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.
ಗಣಪಯ್ಯ ಭಟ್ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಆಶ್ರಯದಲ್ಲಿ ಮೂಡುಬಿದಿರೆ ರೋಟರಿ ಪದವಿ ಪೂರ್ವಕಾಲೇಜಿನಲ್ಲಿ ನಡೆದ “ಕನ್ನಡ ಚಿಂತನ” ಕಾರ್ಯಕ್ರಮದಲ್ಲಿ ಅಭಿಪ್ರಾಯ ಪಟ್ಟರು.

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊಫೆಸರ್ ವೇಣುಗೋಪಾಲ ಶೆಟ್ಟಿ ಅವರು ಬೆಳಗಿ ಹೋಬಳಿ ಕನ್ನಡಸಾಹಿತ್ಯ ಪರಿಷತ್ತಿನ ಕನ್ನಡ ಚಿಂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆಯನ್ನು ಕುರಿತು ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಿದರು. ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು. ರೋಟರಿ ವಿದ್ಯಾಸಂಸ್ಥೆಯ ಖಜಾಂಚಿ ಶ್ರೀ ರತ್ನಾಕರ ಜೈನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೊಟೇರಿಯನ್ ಮೋಹನ್ ಭಟ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ರೋಟರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಯೋಗಿತಅವರು ಧನ್ಯವಾದ ಸಲ್ಲಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಮಾಲತಿ ಅವರು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!