ಜನ ಮನದ ನಾಡಿ ಮಿಡಿತ

Advertisement

ಮುಡಾ ಹಗರಣ ಕೇಸ್: ಸಿದ್ದರಾಮಯ್ಯಗೆ ಶುರುವಾಯ್ತು ಇಡಿ ಸಂಕಷ್ಟ!

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್​ ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಒತ್ತಡ ಹೆಚ್ಚಾಗಿದೆ. ಇದರ ಮಧ್ಯ ಇದೀಗ ಸಿದ್ದರಾಮಯ್ಯಗೆ ಜಾರಿ ನಿರ್ದೇಶನಾಲಯ (ಇಡಿ) ಸಂಕಷ್ಟ ಎದುರಾಗಿದೆ.

 ಇಂದು (ಸೆಪ್ಟೆಂಬರ್ 30) ಬೆಂಗಳೂರಿನ ಇಡಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಸಿಎಂ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್​ಐಆರ್​ ದಾಖಲಾಗುವ ಸಾಧ್ಯತೆ ಇದೆ. ಒಂದು ವೇಳೆ ಇಡಿಯಲ್ಲೂ ಎಫ್​ಐಆರ್ ದಾಖಲಾದರೆ, ಸಿದ್ದರಾಮಯ್ಯಗೆ ಡಬಲ್​ ಸಂಕಷ್ಟ ಎದುರಾದಂತಾಗುತ್ತದೆ.

ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಂದು ತಮ್ಮವರ ಮೂಲಕ ಇಡಿ ಕಚೇರಿಗೆ ದೂರು ತಲುಪಿಸಿದ್ದು, ಇದೀಗ ಇಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ. ಹೀಗಾಗಿ ಯಾವುದೇ ಸಮಯದಲ್ಲೂ ಸಹ ಸಿಎಂ ವಿರುದ್ಧ ಇಡಿ ಅಧಿಕಾರಿಗಳು ಎಫ್​ಐಆರ್ ದಾಖಲಿಸಲಿದ್ದಾರೆ.

ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದ್ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗ್ಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇದೀಗ ಇಡಿ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!