ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.
ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…